ಜೇಮ್ಸ್ ವಿರುದ್ಧ ಹುನ್ನಾರ: ಬೃಹತ್ ಪ್ರತಿಭಟನೆ

184

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಥಿಯೇಟರ್ ನಿಂದ ತೆಗೆದು ಹಾಕಲು ಬಿಜೆಪಿಯವರು ಹುನ್ನಾರ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಎದುರು ಚಿತ್ರದ ನಿರ್ಮಾಪಕರು, ನಿರ್ದೇಶಕರು ಸಮಸ್ಯೆ ಹೇಳಿಕೊಂಡಿದ್ದಾರೆ.

ಇದೀಗ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಗಾಂಧಿನಗರದ ತ್ರಿವೇಣಿ ಚಿತ್ರಮಂದಿರದ ಎದುರು ಮುಂಜಾನೆ 11.30ಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆ. ಜೇಮ್ಸ್ ಬರೀ ಸಿನಿಮಾ ಅಲ್ಲ. ಅದೊಂದು ಭಾವನಾತ್ಮಕ ವಿಚಾರ. ಅಪ್ಪು ಅವರ ಕೊನೆಯ ಚಿತ್ರ. ಪ್ರತಿಯೊಬ್ಬ ಕನ್ನಡಿಗನೂ ಭಾವನಾತ್ಮಕವಾಗಿ ಬೆಸೆದುಕೊಂಡಿದ್ದಾನೆ. ಜೇಮ್ಸ್ ತಂಟೆಗೆ ಬಂದರೆ ಹುಷಾರ್ ಅನ್ನೋ ಎಚ್ಚರಿಕೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!