ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪುನೀತ್ ನಟನೆಯ ಕೊನೆಯ ಚಿತ್ರ ಜೇಮ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜಕುಮಾರ್ ದಂಪತಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಜೇಮ್ಸ್ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದರೂ ಅದನ್ನು ಥಿಯೇಟರ್ ನಿಂದ ತೆಗೆಸುವ ಕೆಲಸವಾಗುತ್ತಿದೆ. ಇದರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಶಿವರಾಜಕುಮಾರ್ ಈ ಬಗ್ಗೆ ಚರ್ಚಿಸಿದ್ದಾರಂತೆ.
ಈ ಬಗ್ಗೆ ಮಾತನಾಡಿರುವ ಶಿವಣ್ಣ, ಕನ್ನಡದ ವಿಚಾರಕ್ಕೆ ಬಂದರೆ ನಾವು ಬಿಡುವುದಿಲ್ಲ. ಈ ಹೋರಾಟ ಸದಾ ನಡೆಯುತ್ತಲೇ ಇರುತ್ತೆ. ನಾವು ಮಾಡುತ್ತಲೇ ಇರಬೇಕು ಎಂದಿದ್ದಾರೆ.