ಪ್ರಜಾಸ್ತ್ರ ಸುದ್ದಿ
ಜಮ್ಮು ಮತ್ತು ಕಾಶ್ಮೀರ: ಕಾಣಿವೆ ನಾಡಿಗೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಚರ್ಚೆ ಇದೀಗ ಜೋರಾಗಿದೆ. 35ಎ ಹಾಗೂ 370 ಕಾಯ್ದೆ ಮರುಸ್ಥಾಪನೆಯಾಗುವ ತನಕ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲವೆಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಈ ಸಂಬಂಧ ಕಣಿವೆ ನಾಡಿನ 14 ಜನ ನಾಯಕರೊಂದಿಗೆ ಜೂನ್ 24ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಕ್ಷೇತ್ರ ವಿಂಗಡಣೆ ಬಳಿಕ ಚುನಾವಣೆ ನಡೆಸುವುದಾಗಿ ಪ್ರಧಾನಿ ಹೇಳಿದ್ದಾರೆ. ಆದ್ರೆ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಯಾಗುವ ತನಕ ಚುನಾವಣೆಯಲ್ಲಿ ಭಾಗವಹಿಸಲ್ಲ ಎಂದು ಮಾಜಿ ಸಿಎಂಗಳಾದ ಓಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಹೇಳಿದ್ದಾರೆ.
35 ಎ ಹಾಗೂ 370 ಮರುಸ್ಥಾಪನೆ ಸಂಬಂಧ ತಿಂಗಳು, ವರ್ಷಗಳೇ ಕಳೆಯಲಿ ನಾವು ಚುನಾವಣೆಯಲ್ಲಿ ಸ್ಪರ್ಧಿಸಲ್ಲವೆಂದು ಹೇಳಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆ ನಡೆಯುವುದು ಇನ್ನಷ್ಟು ತಡವಾಗುವ ಸಾಧ್ಯತೆಯಿದೆ.