ಜ.21ರಂದು ಸಿಂದಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

318

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಜನವರಿ 21ರಂದು ಸಿಂದಗಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ರಾಜ್ಯ ಕಾರ್ಯದರ್ಶಿ ವಿನಯ ಬಿದರೆ ತಿಳಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ತುಂಬಾ ವಿಜಯ ಸಂಕಲ್ಪ ಅಭಿಯಾನ ನಡೆಯಲಿದೆ. ಇದರ ಮೊದಲ ಕಾರ್ಯಕ್ರಮ ಸಿಂದಗಿಯಲ್ಲಿ ನಡೆಯುತ್ತಿದೆ. ಜೆ.ಪಿ ನಡ್ಡಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರು, ರಾಜ್ಯ ಸಂಚಾಲಕರಾದ ಸಿ.ಎನ್ ಅಶ್ವಥನಾರಾಯಣ, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಮನೆ ಮನೆಗೆ ರಾಜ್ಯ ಹಾಗೂ ಕೇಂದ್ರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ 58 ಸಾವಿರ ಬೂತ್ ಗಳಲ್ಲಿಯೂ ಸಮಿತಿಗಳನ್ನು ರಚನೆ ಮಾಡಿ, ಪೇಜ್ ಪ್ರಮುಖರನ್ನು ನೇಮಿಸಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಸಿಂದಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 40-50 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಅಂತಾ ತಿಳಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್ ಪಾಟೀಲ(ಕೂಚಬಾಳ), ಜಿಲ್ಲಾ ಮಾಧ್ಯಮ ಪ್ರಮುಖ ವಿಜು ಜೋಶಿ, ತಾಲೂಕು ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಶಿವರುದ್ರ ಬಾಗಲಕೋಟ, ಶ್ರೀಶೈಲ ಪಾರಗೊಂಡ, ಶಿವಕುಮಾರ ಬಿರಾದಾರ ಸೇರಿದಂತೆ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!