ರೈತರು ಸಂಕಷ್ಟದಲ್ಲಿರುವಾಗ ಜನಸ್ವರಾಜ್ ಹೆಸರಲ್ಲಿ ಜಾತ್ರೆ: ಹೆಚ್ಡಿಕೆ

212

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಅತಿಯಾದ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿ ರೈತರು ಕಣ್ಣೀರು ಹಾಕುತ್ತಿದ್ದಾರೆ. ಇಂತಹ ಸಮಯದಲ್ಲಿ ಜನಸ್ವರಾಜ್ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯವಲ್ಲವೆಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇಷ್ಟು ದಿನ ಕೋವಿಡ್ ನಿಂದ ಸಂಕಷ್ಟವಿದ್ದರೆ ಇದೀಗ ಅತಿಯಾದ ಮಳೆಯಿಂದ ಸಮಸ್ಯೆ ಎದುರಾಗಿದೆ. ಅಧಿಕಾರಿಗಳೇ ಮಾಹಿತಿ ನೀಡಿರುವ ಪ್ರಕಾರ ಜುಲೈ-ನವೆಂಬರ್ ನಲ್ಲಿ 7.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾಳಾಗಿದೆ ಎಂದರು.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದಾಗಿ ಜನರ ಬದುಕು ಮತ್ತಷ್ಟು ಹೈರಾಣಾಗಿದೆ. ಅವರ ನೆರವಿಗೆ ನಿಲ್ಲಬೇಕಾಗಿರುವ ಸಮಯದಲ್ಲಿ ಜನಸ್ವರಾಜ್ ಯಾತ್ರೆ ಹೆಸರಿನಲ್ಲಿ ಜಾತ್ರೆ ಮಾಡುವುದು ಸರಿಯಲ್ಲವೆಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!