ವಿಜಯಪುರದಲ್ಲಿ ನಾಳೆ ಜನಪರ ಉತ್ಸವ

150

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇತೃತ್ವದಲ್ಲಿ ನಾಳೆ ಜನಪರ ಉತ್ಸವ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಳೆ ಸಂಜೆ 6ಕ್ಕೆ ಆನಂದ ಮಹಲ್ ನಲ್ಲಿ ಜನಪರ ಉತ್ಸವ ನಡೆಯಲಿದೆ.

ಈ ಕಾರ್ಯಕ್ರಮಕ್ಕೂ ಮೊದಲು ಸಿದ್ಧೇಶ್ವರ ದೇವಸ್ಥಾನದಿಂದ ಆನಂದ ಮಹಲ್ ವರೆಗೂ ಕಲಾ ತಂಡಗಳಿಂದ ಲಂಬಾಣಿ ಕುಣಿತ, ಹಗಲು ವೇಷ, ಗೊಂಬೆ ಕುಣಿತ ಸೇರಿದಂತೆ ವಿವಿಧ ಸಂಸ್ಕೃತಿಗಳ ಅನಾವರಣ ನಡೆಯಲಿದ್ದು, ತದನಂತರ ಕಾರ್ಯಕ್ರಮದಲ್ಲಿ ಸ್ಥಳೀಯ ರಾಜಕೀಯ ನಾಯಕರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.




Leave a Reply

Your email address will not be published. Required fields are marked *

error: Content is protected !!