ಜನಾರ್ಧನ್ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ

74

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿ ಬಂದ ಬಳಿಕ ಬಿಜೆಪಿ ತೊರೆದು ತಮ್ಮದೆ ಪಕ್ಷ ಕಟ್ಟಿದ್ದ ಮಾಜಿ ಸಚಿವ, ಶಾಸಕ ಜನಾರ್ಧನ್ ರೆಡ್ಡಿ ಪತ್ನಿಯೊಂದಿಗೆ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮಾಜಿ ಸಚಿವ ಟಿ.ಜಾನ್ ಅವರ ಮಗ ಟಿ.ಥಾಮಸ್ ಸಹ ಬಿಜೆಪಿ ಸೇರ್ಪಡೆಯಾದರು.

ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಲಿ ಜನಾರ್ಧನ್ ರೆಡ್ಡಿ ಬಿಜೆಪಿ ಸೇರಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಸಿ.ಟಿ ರವಿ, ಸಂಸದ ಪಿ.ಸಿ ಮೋಹನ್ ಸೇರಿ ಇತರರು ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಬಿಜೆಪಿಗೆ ಮರು ಸೇರ್ಪಡೆಯಾದರು. 2023ರ ವಿಧಾನಸಭೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!