2 ವಾರ ಬಳ್ಳಾರಿಯಲ್ಲಿ ರೆಡ್ಡಿ

659

ಬೆಂಗಳೂರು: ಮಾಜಿ ಸಚಿವ ಜನಾರ್ದನ್ ರೆಡ್ಡಿ ಎರಡು ವಾರಗಳ ಕಾಲ ಬಳ್ಳಾರಿಯಲ್ಲಿ ಇರಲಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಎರಡು ವಾರ ಇರಲು ಸುಪ್ರೀಂ ಕೋರ್ಟ್ ರೆಡ್ಡಿಗೆ ಅನುಮತಿ ನೀಡಿದೆ.

ನಮ್ಮ ಮಾವನವರು ಪಾರ್ಶವಾಯುಗೆ ತುತ್ತಾಗಿದ್ದಾರೆ. ಆರೋಗ್ಯದಲ್ಲಿ ಸಾಕಷ್ಟು ತೊಂದರೆಯಾಗಿದ್ದು, ಹೀಗಾಗಿ ಅವರನ್ನ ನೋಡಿಕೊಳ್ಳಲು ಹೋಗಬೇಕು. ಈ ಕಾರಣಕ್ಕೆ ನನಗೆ ಒಂದು ತಿಂಗಳ ಬಳ್ಳಾರಿಯಲ್ಲಿ ಇರಲು ಅವಕಾಶ ನೀಡಬೇಕೆಂದು ಕೋರ್ಟ್ ಗೆ ಮಾಜಿ ಸಚಿವರು ಕೇಳಿಕೊಂಡಿದ್ರು. ಆದ್ರೆ, ಕೋರ್ಟ್ ಒಂದು ತಿಂಗಳು ನೀಡಲು ಸಾಧ್ಯವಿಲ್ಲ ಎಂದು ಹೇಳಿ ಎರಡು ವಾರ ಇರಲು ಅವಕಾಶ ನೀಡಿದೆ.

ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ಜನಾರ್ದನ್ ರೆಡ್ಡಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಅನ್ನೋ ಕಾರಣಕ್ಕೆ ಅವರಿಗೆ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ


TAG


Leave a Reply

Your email address will not be published. Required fields are marked *

error: Content is protected !!