ಪ್ರಜಾಸ್ತ್ರ ಸುದ್ದಿ
ಕೋಲಾರ: ಜೆಡಿಎಸ್ ಹಮ್ಮಿಕೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ರ್ಯಾಲಿಯಲ್ಲಿ ಭಾಗವಹಿಸುವವರಿಗೆ ಉಚಿತ ಪೆಟ್ರೋಲ್ ಎಂದು ಹೇಳಿದ್ದಕ್ಕೆ, ಬೈಕ್ ಸವಾರರು ಮಾಲೂರು ಪೆಟ್ರೋಲ್ ಪಂಪ್ ಮುಂದೆ ಮುಗಿಬಿದ್ದ ಪ್ರಸಂಗ ನಡೆದಿದೆ.
ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ ರಾಮೇಗೌಡ ಉಚಿತ ಪೆಟ್ರೋಲ್ ವ್ಯವಸ್ಥೆ ಮಾಡಿದ್ದು, ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿ, ಟೀ ಶರ್ಟ್ ಕೊಟ್ಟು ಬೈಕ್ ಮೇಲೆ ಆರ್ ಜೆ ಎಂದು ಬರೆದು ಕಳುಹಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಭಾಗವಹಿಸಿದ್ದರು.