ಪ್ರಜಾಸ್ತ್ರ ಸುದ್ದಿ
ನವದೆಹಲಿ: ಗುಂಡಿನ ದಾಳಿಯಲ್ಲಿ ಹತರಾದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಗೌರವಾರ್ಥ ಶನಿವಾರ ದೇಶದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಹೀಗಾಗಿ ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಲು ನಿರ್ಧರಿಸಲಾಗಿದೆ.
ದೇಶದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಎಲ್ಲ ಮನೋರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಇನ್ನು ಕರ್ನಾಟಕ ಸಿಎಂ ಬೊಮ್ಮಾಯಿ ಶನಿವಾರ ಹಾಗೂ ಭಾನುವಾರ ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಪ್ರವಾಸವನ್ನು ಮುಂದೂಡಿದ್ದಾರೆ.