ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಯಚಾಮರಾಜ ಒಡೆಯರ ಅವರ ಜನ್ಮ ಶತಮಾನೋತ್ಸವ ಸಮಾರಂಭ ಆಚರಿಸಲಾಗ್ತಿದೆ. ಈ ಒಂದು ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಭಾಗವಹಿಸಿದ್ರು.
ಅರಮನೆಯ ದರ್ಬಾರ್ ಹಾಲ್ ನಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪತ್ನಿ ಸವಿತಾ ಕೋವಿಂದ, ರಾಜ್ಯಪಾಲ ವಜುಬಾಯಿ ವಾಲಾ, ವಸತಿ ಹಾಗೂ ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣ, ರಾಜಮಾತೆ ಪ್ರಮೋದಾದೇವಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ರು.
ಎರಡು ದಿನಗಳ ಕಾಲ ಮೈಸೂರಿಗೆ ಆಗಮಿಸಿರುವ ರಾಷ್ಟ್ರಪತಿ ಅವರು, ನಾಳೆ ಚಾಮುಂಡಿಬೆಟ್ಟ ಹಾಗೂ ನಂಜನಗೂಡಿಗೆ ಭೇಟಿ ನೀಡಲಿದ್ದಾರೆ.