ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಹಿಳಾ ಕಾರ್ಯಕರ್ತೆಯೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ, ಲೋಕಸಭಾ ಚುನಾವಣೆಯಲ್ಲಿ 30 ಕೋಟಿ ರೂಪಾಯಿ ಹಣ ಖರ್ಚು ಹಾಗೂ ಮಾಜಿ ಸಂಸದ ದಿವಂಗತ ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಾರಣಕ್ಕೆ ಎಲ್.ಆರ್ ಶಿವರಾಮೇಗೌಡರನ್ನು ಜೆಡಿಎಸ್ ಉಚ್ಛಾಟಿಸಿದೆ.
ಮಾಜಿ ಸಂಸದ ಶಿವರಾಮೇಗೌಡರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಆದೇಶಿಸಿದ್ದಾರೆ.