ಜೆಡಿಎಸ್ ಮುಖಂಡ ರಸೂಲ್ ದೇಸಾಯಿ ನಿಧನ

300

ಪ್ರಜಾಸ್ತ್ರ ಸುದ್ದಿ

ಮುದ್ದೇಬಿಹಾಳ: ತಾಲೂಕಿನ ಹಿರಿಯ ಜೆಡಿಎಸ್ ಮುಖಂಡ ರಸೂಲ್ ದೇಸಾಯಿ ಅವರು ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಸಾಕಷ್ಟು ಸಮಾಜಮುಖಿ ಕೆಲಸಗಳನ್ನ ಮಾಡಿಕೊಂಡು ಬಂದಿದ್ದ ರಸೂಲ್ ದೇಸಾಯಿ, ತಾಲೂಕಿನ ಜನರಿಗೆ ಹತ್ತಿರವಾಗಿದ್ದರು. ಪುರಸಭೆ ಹಾಗೂ ಅಂಜುಮನ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿಯೂ ಸಹ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡಿದ್ದಾರೆ. ಇವರ ನಿಧನಕ್ಕೆ ಸಮಾಜದ ಬಂಧುಗಳು, ತಾಲೂಕಿನ ಜನತೆ ಕಂಬನಿ ಮಿಡಿದಿದೆ.




Leave a Reply

Your email address will not be published. Required fields are marked *

error: Content is protected !!