ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷದಿಂದ ಪಕ್ಷಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಒಬ್ಬರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಇದೀಗ ಜೆಡಿಎಸ್ ನ ಮತ್ತೊಂದು ವಿಕೆಟ್ ಬಿದ್ದಿದ್ದು, ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸಭೆಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ನಂತರ ವಿಧಾನಸೌಧ ಮೆಟ್ಟಲುಗಳಿಗೆ ನಮಸ್ಕಾರ ಮಾಡಿ ಹೊರಟರು. ಕಳೆದ ಹಲವು ದಿನಗಳಿಂದ ಇವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಇದೀಗ ಅದಕ್ಕೆ ಪುಷ್ಠಿ ನೀಡುವಂತೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
2018ರಲ್ಲಿ ಕಾಂಗ್ರೆಸ್ ನ ಎ.ಮಂಜು ಎದುರು ಎ.ಟಿ ರಾಮಸ್ವಾಮಿ ಗೆಲುವು ಸಾಧಿಸಿದ್ದರು. ಈಗ ಎ.ಮಂಜು ಜೆಡಿಎಸ್ ಸೇರಿದ್ದಾರೆ. ಪಂಚರತ್ನ ಯಾತ್ರೆ ವೇಳೆ ಎ.ಮಂಜು ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ಇಲ್ಲಿ ಎ.ಮಂಜು ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ನಿಂದ ಎ.ಟಿ ರಾಮಸ್ವಾಮಿ ಎನ್ನಲಾಗುತ್ತಿದೆ. ಆದರೆ, ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯಲ್ಲಿ ಶ್ರೀಧರಗೌಡ ಹಾಗೂ ಕೃಷ್ಣೇಗೌಡ ಹೆಸರು ಇದೆ. ಇವರನ್ನು ಬಿಟ್ಟು ಎ.ಟಿ ರಾಮಸ್ವಾಮಿ ಟಿಕೆಟ್ ಘೋಷಣೆಯಾಗುತ್ತಾ ಅನ್ನೋ ಕುತೂಹಲವಿದೆ.