ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಬಹುಅಂಗಾಗ ವೈಪಲ್ಯದಿಂದ ಬಳಲುತ್ತಿದ್ದ ಶಾಸಕ ಬಿ.ಸತ್ಯನಾರಾಯಣ ಅವರು ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12.20ರ ಸುಮಾರಿಗೆ ಸಾವನ್ನಪ್ಪಿದ್ದಾರೆ.
ಸತ್ಯನಾರಾಯಣ ಅವರಿಗೆ ಪತ್ನಿ, ಓರ್ವ ಪುತ್ರನಿದ್ದಾನೆ. ಜೆ.ಹೆಚ್ ಪಟೇಲರ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಮೂರು ಬಾರಿ ಶಾಸಕರಾಗಿ, ದಶಕಗಳ ಕಾಲ ರಾಜ್ಯ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ರು. ಶಾಸಕರ ಸಾವಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.
ಸತ್ಯನಾರಾಯಣ ತುಂಬಾ ಮೃದು ಸ್ವಭಾವದ ವ್ಯಕ್ತಿ. ನನ್ನ ಮತ್ತು ಅವರ ಸ್ನೇಹ 30 ವರ್ಷಗಳಿಂದ ಇದೆ. ಅವರಿಲ್ಲದ ದಿನಗಳನ್ನ ನೆನಯಲು ನನ್ನಿಂದ ಸಾಧ್ಯವಿಲ್ಲ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನ ಆ ದೇವರು ನೀಡಲಿ ಎಂದಿದ್ದಾರೆ.
ಇನ್ನು ನಾಡಿನ ರಾಜಕೀಯ ಗಣ್ಯರು ಬಿ.ಸತ್ಯನಾರಾಯಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.