ಪ್ರಜಾಸ್ತ್ರ ಸುದ್ದಿ
ಮೈಸೂರು: ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಟಿಕೆಟ್ ಕೇಳಿರುವುದು ಸತ್ಯ. ತಮಗೆ ಹಾಗೂ ಮಗನಿಗೆ ಕಾಂಗ್ರೆಟ್ ಟಿಕೆಟ್ ಕೇಳಿದ್ದಾರೆ. ಆದ್ರೆ, ಯಾವ ಕ್ಷೇತ್ರದಿಂದ ಅನ್ನೋದು ಹೇಳಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದ ಫ್ಯೂಸ್ ಕಿತ್ತು ಹಾಕಿದ್ದೇನೆ ಎಂದಿರುವ ಹೆಚ್.ಡಿ ಕುಮಾರಸ್ವಾಮಿ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಜನತೆಗೆ ನಿಜ ಗೊತ್ತಾಗಲಿದೆ. ಜೆಡಿಎಸ್ ಎಲ್ಲಿಗೆ ಹೋಗಿ ನಿಲ್ಲಲಿದೆ ಅನ್ನೋದು ಜನತೆಯೇ ತೀರ್ಮಾನಿಸುತ್ತಾರೆ ಎಂದು ತಿರುಗೇಟು ನೀಡಿದ್ರು.