ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಂಗ್ರೆಸ್ ದ್ವಿಮುಖ ನೀತಿಯ ವಿರುದ್ಧ ಜೆಡಿಎಸ್ ಹೋರಾಟ ಮಾಡುತ್ತಿದೆ. ಆದರೆ ಕಳೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಬೆಂಬಲ ನೀಡಲಿಲ್ಲ ಅನ್ನೋ ನೋವಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.
ಬಿಜೆಪಿ ಜೊತೆಗೆ ನಾವು ಹೊಂದಾಣಿಕೆ ಮಾಡಿಕೊಂಡರೂ ಸಹ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಬದ್ಧವಾಗಿದೆ. ಜೆಡಿಎಸ್ ತನ್ನ ತತ್ವ ಸಿದ್ಧಾಂತದಿಂದ ವಿಮುಖವಾಗಲ್ಲ. ದೇಶದಲ್ಲಿ ಬಿಜೆಪಿಯೊಂದಿಗೆ ಸಂಪರ್ಕವಿಲ್ಲದ ಪಕ್ಷವಿಲ್ಲ. ಕಾಂಗ್ರೆಸ್ ದುರಾಡಳಿತದ ವಿರುದ್ಧ ರಾಜ್ಯದಲ್ಲಿ ಹೋರಾಟ ನಡೆಸಲಾಗುತ್ತೆ ಅಂತಾ ಹೇಳಿದರು.