ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ಜೆಡಿಎಸ್ ಭರ್ಜರಿ ಪ್ರಚಾರ ನಡೆಸಿದ್ದು, ಪಂಚರತ್ನ ಯಾತ್ರೆ ಇದೀಗ ಗುಮ್ಮಟನಗರಿ ಜಿಲ್ಲೆಯಲ್ಲಿ ಸಾಗುತ್ತಿದೆ. ಶುಕ್ರವಾರ ನಗರದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಿಸಿದರು.
ವಿಜಯಪುರ ಜಿಲ್ಲೆಯಲ್ಲಿ 5 ಕಡೆ ಜೆಡಿಎಸ್ ಗೆಲ್ಲಲಿದೆ. ನಾಗಠಾಣ ಕ್ಷೇತ್ರದ ಶಾಸಕ ಸೇರಿ ಇಬ್ಬರಿಗೆ ಮುಂದೆ ಅಧಿಕಾರಕ್ಕೆ ಬರಲಿರುವ ಜೆಡಿಎಸ್ ಸರ್ಕಾರದಲ್ಲಿ ಸಚಿವರಾಗುವ ಭವಿಷ್ಯವಿದೆ. ರೈತರ ಮಗನಾಗಿರುವ ಕುಮಾರಣ್ಣ ನಿತ್ಯವೂ ಹಳ್ಳಿ ಹಳ್ಳಿಗೆ ಹೋಗಿ ರೈತರ ಸಮಸ್ಯೆ ಕೇಳುತ್ತಿದ್ದಾರೆ ಎಂದರು.