ಕಾಂಗ್ರೆಸ್, ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ

252

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಭಯ ಸದನಗಳ ಅಧಿವೇಶನವನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಳು ಮಾಡುತ್ತಿವೆ ಎಂದು ಜೆಡಿಎಸ್ ಪ್ರತಿಭಟನೆ ನಡೆಸಿದೆ. ವಿಧಾನಸೌಧ ಹಾಗೂ ವಿಕಾಸೌಧ ಮಧ್ಯವಿರುವ ಗಾಂಧಿ ಪ್ರತಿಮೆ ಎದುರು ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶೆಂಪುರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದೊಂದು ವಾರದಿಂದ ಸದನದ ಸಮಯ ಹಾಳು ಮಾಡಲಾಗಿದೆ. ಸರ್ಕಾರಕ್ಕೂ ಹೊಣೆ ಇದೆ. ಪ್ರತಿಭಟನಾನಿರತರನ್ನು ಹೊರ ಹಾಕಿ ಸದನ ನಡೆಸಬೇಕು ಎಂದು ಎಚ್.ಕೆ ಕುಮಾರಸ್ವಾಮಿ ಹೇಳಿದರು.




Leave a Reply

Your email address will not be published. Required fields are marked *

error: Content is protected !!