ಉಡುಪಿ: ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲವೆಂದು ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಹೇಳಿದ್ದಾರೆ ಅನ್ನೋ ವಿಚಾರ ಎಲ್ಲೆಡೆ ಚರ್ಚೆ ಆಗ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತ್ನಾಡಿದ ಮಾಜಿ ಸಿಎಂ, ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಿದ್ರೆ ಇವರು ಎಷ್ಟು ಜಾತ್ಯಾತೀತರು ಎಂಬುವುದು ತಿಳಿಯುತ್ತೆ ಅಂತಾ ಹೇಳಿದ್ದಾರೆ. ನಿಜವಾಗಿಯೂ ಜಾತ್ಯಾತೀತರಾಗಿದ್ರೆ ಬಿಜೆಪಿಗೆ ಬೆಂಬಲ ನೀಡುವುದಿಲ್ಲವೆಂದರು. ಅಲ್ದೇ, ಯಡಿಯೂರಪ್ಪ ಹಾಗೂ ದೇವೇಗೌಡರ ನಡುವೆ ಏನು ಒಳ ಒಪ್ಪಂದವಾಗಿದೆಯೋ ಗೊತ್ತಿಲ್ಲ ಅಂತಾ ಹೇಳಿದ್ದಾರೆ.