ಜೆಡಿಎಸ್ ಶಾಸಕ ಶ್ರೀನಿವಾಸಗೌಡ ರಾಜೀನಾಮೆಗೆ ಆಗ್ರಹ

165

ಪ್ರಜಾಸ್ತ್ರ ಸುದ್ದಿ

ಕೋಲಾರ: ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು, ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕುವ ಮೂಲಕ, ಅಡ್ಡ ಮತದಾನ ಮಾಡಿದ್ದಾರೆ. ಹೀಗಾಗಿ ಎಚ್.ಡಿ ಕುಮಾರಸ್ವಾಮಿ, ರಾಜೀನಾಮೆ ನೀಡಿ ಚುನಾವಣೆ ಎದುರಿಸಿ ಎಂದಿದ್ದಾರೆ.

ಇತ್ತ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರು ಶಾಸಕರ ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಶಾಸಕರ ಮನೆಯ ಸುತ್ತು ಬಿಗಿ ಪೊಲೀಸ್ ಬಂದೋಬಸ್ತಿ ಒದಗಿಸಲಾಗಿದೆ. ಶಾಸಕರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!