ದುಮ್ಕಾ: ಜಾರ್ಖಂಡ್ ನಲ್ಲಿ ಭರ್ಜರಿಯಾಗಿ ಜಯಗಳಿಸಿರುವ ಜೆಎಂಎಂ ಮುಂದಾಳತ್ವದ ಮೈತ್ರಿಕೂಟ ಸರ್ಕಾರ ರಚನೆಗೆ ಎಲ್ಲ ರೀತಿಯ ತಯಾರಿ ನಡೆಸಿದೆ. ಇನ್ನು ಎರಡು ದಿನಗಳಲ್ಲಿ ಸರ್ಕಾರ ರಚನೆ ಮಾಡುವುದಾಗಿ ಜೆಎಂಎಂ ಮುಖ್ಯಸ್ಥ ಹೇಮಂತ ಸೊರೇನ್ ಸಹೋದರ ಬಂಸತ್ ಹೇಳಿದ್ದಾರೆ.
ನಮ್ಮ ಪರವಾಗಿ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಇನ್ನು ಎರಡ್ಮೂರು ದಿನಗಳಲ್ಲಿ ನೂತನ ಸರ್ಕಾರ ರಚನೆಯಾಗಲಿದೆ. ಹೇಮಂತ ಸೊರೇನ್ ಸಿಎಂ ಆಗುವುದು ಬಹುತೇಕ ಫಿಕ್ಸ್ ಆಗಿದೆ ಅಂತಾ ಹೇಳಿದ್ದಾರೆ. 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ, ಕಾಂಗ್ರೆಸ್ ಹಾಗೂ ಆರ್ ಜೆಡಿ ಮೈತ್ರಿಕೂಟ 47 ಸ್ಥಾನಗಳಲ್ಲಿ ಗೆದ್ದು ಬೀಗಿದೆ. ಕಮಲ ಪಡೆ 25 ಸ್ಥಾನಗಳಲ್ಲಿ ಜಯಗಳಿಸಿ ವಿರೋಧ ಪಕ್ಷದ ಸ್ಥಾನಕ್ಕೆ ಬಂದಿದೆ.