ಪ್ರಜಾಸ್ತ್ರ ಸುದ್ದಿ
ಸಿಂದಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅನ್ನೋ ಕಾರ್ಯಕ್ರಮ, ತಾಲೂಕಿನ ಮಲಘಾಣ ಗ್ರಾಮದಲ್ಲಿ ಮಡೆಯುತ್ತಿದೆ. ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಪಂಚಾಯ್ತಿ ಸಿಇಓ ರಾಹುಲ್ ಶಿಂಧೆ, ಇಂಡಿ ಎಸಿ ಎಂ.ಎನ್ ಚೋರಗಸ್ತಿ, ಇಂಡಿ ಡಿವೈಎಸ್ಪಿ ಶ್ರೀಧರ್ ದೊಡ್ಡಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಶೀಬಾಯಿ ಜಾಧವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ, ತಾಲೂಕು ಮಟ್ಣದ ಅಧಿಕಾರಿಗಳು, ಆಸಂಗಿಹಾಳ, ಮಲಘಾಣ, ಸೋಮಜಾಳ, ಮಂಗಳೂರು ಗ್ರಾಮದ ಜನರು ಭಾಗವಹಿಸಿದ್ದಾರೆ.