ಪ್ರಜಾಸ್ತ್ರ ಸುದ್ದಿ
ಹಲಗೂರು: ಕಾವೇರಿ ವನ್ಯಜೀವಿ ವಿಭಾಗ ಹಲಗೂರು ವನ್ಯಜೀವಿ ವಲಯದ ಬಸವನಬೆಟ್ಟ ಅರಣ್ಯ ಪ್ರದೇಶದಲ್ಲಿನ ಮುಖ್ಯ ರಸ್ತೆ ದಾಟುವ ಜಿಂಕೆ ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಬೇಟೆ ಆಡುತ್ತಿರುವುದು ಕಂಡು ಬಂದಿದೆ.
ಶನಿವಾರ ಜಿಂಕೆಗಳ ಬೇಟೆಯಲ್ಲಿ ತೊಡಗಿದ್ದ ನಾಲ್ವರು ಬೇಟೆಕೋರರ ಗುಂಪು ಎರಡು ಜಿಂಕೆಗಳನ್ನು ಕೊಂದಿದೆ. ವಿಷಯ ತಿಳಿದು ಅರಣ್ಯ ಇಲಾಖೆಯ ವಾಚರ್ ಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಬೇಟೆಕೋರರನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಅರಣ್ಯ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಅರಣ್ಯ ಸಿಬ್ಬಂದಿ ಪ್ರತಿಯಾಗಿ ಗುಂಡು ಹಾರಿಸಿದಾಗ ದುಷ್ಕರ್ಮಿಯೊಬ್ಬ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.