ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮಾಂಸಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಜೆಎನ್ ಯು ಕ್ಯಾಂಪಸ್ ನಲ್ಲಿ ಭಾನುವಾರ ರಾತ್ರಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಹಾಗೂ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ಸಂಬಂಧ ಇಂದು ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಮನವಮಿ ಹಿನ್ನೆಲೆಯಲ್ಲಿ ಮಾಂಸಹಾರದ ವಿಚಾರದಲ್ಲಿ ಎರಡು ಸಂಘಟನೆಗಳ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿ ಗಾಯಗೊಂಡಿದ್ದಾರೆ. ಜೆಎನ್ ಯುಎಸ್ ಯು, ಎಸ್ಎಫ್ಐ, ಡಿಎಸ್ಎಫ್ ಹಾಗೂ ಎಐಎಸ್ಎ ಸಂಘಟನೆಯ ವಿದ್ಯಾರ್ಥಿಗಳು ದೂರು ನೀಡಿದ್ದು, ಎಬಿವಿಪಿಯ ವಿದ್ಯಾರ್ಥಿಗಳು ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಮನೋಜ್.ಸಿ ತಿಳಿಸಿದ್ದಾರೆ.