ಬೆಂಗಳೂರು: ಕರ್ತವ್ಯದಲ್ಲಿದ್ದ ಖಾಸಗಿ ಸುದ್ದಿ ವಾಹಿನಿಯ ಮೃತ ಪತ್ರಕರ್ತ ಕುಟುಂಬಕ್ಕೆ 5 ಲಕ್ಷ ರೂಪಾಯಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ರಾಮನಗರ ಜಿಲ್ಲಾ ವರದಿಗಾರ ಹನುಮಂತು, ಪಾದರಾಯನಪುರ ಘಟನೆ ಆರೋಪಿಗಳನ್ನ ರಾಮನಗರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಇದರ ವರದಿ ಮುಗಿಸಿಕೊಂಡು ವಾಪಸ್ ಬೈಕ್ ನಲ್ಲಿ ಆಗ್ತಿದ್ದ ವೇಳೆ ಹಿಂದಿನಿಂದ ಬಂದ ಎಟಿಎಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸಂಸದ ಡಿ.ಕೆ ಸುರೇಶ ಅಂತಿಮ ದರ್ಶನ ಪಡೆದು ಪರಿಹಾರದ ಭರವಸೆ ನೀಡಿದ್ದಾರೆ.
ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ತಲಾ 5 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಡಿ.ಕೆ ಶಿವಕುಮಾರ ಚಾರಿಟಿಬಲ್ ಟ್ರಸ್ಟ್ ವತಿಯಿಂದ 5 ಲಕ್ಷ ರೂಪಾಯಿ ಘೋಷಿಸಿದ್ದಾರೆ.