ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ಯ ನಿಧನ

237

ಪ್ರಜಾಸ್ತ್ರ ಸುದ್ದಿ

ಮೈಸೂರು: ಅನಾರೋಗ್ಯಕ್ಕೆ ತುತ್ತಾಗಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ(67) ಗುರುವಾರ ನಿಧನರಾಗಿದ್ದಾರೆ. ಪತ್ರಕರ್ತನ ಜೊತೆಗೆ ರಂಗಭೂಮಿ ಬಗ್ಗೆ ಸಾಕಷ್ಟು ಆಸಕ್ತಿ ಬೆಳೆಸಿಕೊಂಡಿದ್ರು. ಕಂಪನಿ ನಾಟಕಗಳ ಬಗ್ಗೆ, ನಾಟಕ ಕಂಪನಿಗಳ ಬಗ್ಗೆ, ಕಲಾವಿದರ ಬಗ್ಗೆ ಹಲವು ಪುಸ್ತಕಗಳನ್ನ ಬರೆದಿದ್ದಾರೆ.

ನಾಟಕ ಅಕಾಡಮಿ ಸದಸ್ಯರಾಗಿದ್ರು. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ರು. ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿದ್ರು. ಹೀಗೆ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಗುಡಿಹಳ್ಳಿ ನಾಗರಾಜ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಹ ಸಂದಿದೆ. ಅವರ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!