ಪತ್ರಕರ್ತನ ಹತ್ಯೆ: ಕಮಿಷನರ್ ಭಾಸ್ಕರ ರಾವ್ ಖಂಡನೆ

326

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದ ಪತ್ರಕರ್ತನ ಹತ್ಯೆ ಸಂಬಂಧ, ಟ್ವೀಟ್ ಮಾಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ ರಾವ್ ಅವರು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.

ಇನ್ನೊಬ್ಬರನ್ನ ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯ್ತು. ಇದು ತುಂಬಾ ನೋವಿನ ಸಂಗತಿ ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ಕಾಂಗ್ರೆಸ್ ಯುವ ನಾಯಕ, ಸಂಸದ ರಾಹುಲ ಗಾಂಧಿ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ತನ್ನ ಸೊಸೆಗೆ ಕಿರುಕುಳ ನೀಡಿದ್ದನ್ನ ವಿರೋಧಿಸಿದ್ದಕ್ಕೆ ಹತ್ಯೆಯಾಗಿದೆ. ರಾಮರಾಜ್ಯ ಭರವಸೆ ನೀಡಿದ ಸಿಎಂ ಯೋಗಿ ಆದಿತ್ಯನಾಥ ಗೂಂಡಾ ರಾಜ್ಯ ಕೊಟ್ಟರು ಎಂದು ಕಿಡಿ ಕಾರಿದ್ದಾರೆ.

ಗಾಜಿಯಾಬಾದ್ ನ ವಿಜಯ ನಗರದಲ್ಲಿ ಜುಲೈ 20 ರಂದು ಪತ್ರಕರ್ತ ವಿಕ್ರಂ ಜೋಶಿ ಮೇಲೆ ಗುಂಡು ಹಾರಿಸಲಾಗಿತ್ತು. ಇದೀಗ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೇಶದಲ್ಲಿ ಪತ್ರಕರ್ತರ ಹತ್ಯೆ ಮುಂದುವರೆದಿರುವುದು ನಿಜಕ್ಕೂ ದುರಂತ.




Leave a Reply

Your email address will not be published. Required fields are marked *

error: Content is protected !!