ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಏಪ್ರಿಲ್ 2ರಂದು ಪೊಲೀಸ್ ಠಾಣೆಯಲ್ಲಿ ಪತ್ರಕರ್ತರ ಬಟ್ಟೆ ಬಿಚ್ಚಿಸಿದ ಪ್ರಕರಣ ಸಂಬಂಧ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವನ್ನು ಲಾಕ್ ಅಪ್ ನಲ್ಲಿ ಕಳಚಲಾಗಿದೆ. ಬಿಜೆಪಿ ಸರ್ಕಾರ ಸತ್ಯಕ್ಕೆ ಹೆದರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿರುವುದರಿಂದ ಆಕ್ರೋಶ ವ್ಯಕ್ತವಾಗಿದೆ.
ಬಿಜೆಪಿ ಶಾಸಕ ಕೇದರನಾಥ್ ಶುಕ್ಲಾ ಹಾಗೂ ಅವರ ಮಗ ಗುರು ದತ್ತ ಕೆಟ್ಟದಾಗಿ ಮಾತನಾಡಿದ್ದಾರೆ ಅನ್ನೋ ಆರೋಪದ ಮೇಲೆ ರಂಗಭೂಮಿ ಕಲಾವಿದ ನೀರಜ್ ರನ್ನು ಬಂಧಿಸಲಾಗಿದೆ. ಇವರ ಬಿಡುಗಡೆಗೆ ಆಗ್ರಹಿಸಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.