ಸಕಲ ಸರ್ಕಾರಿ ಗೌರವಗಳೊಂದಿಗೆ ನಿಸಾರ ಅಂತ್ಯಸಂಸ್ಕಾರ: ಆರ್.ಅಶೋಕ

408

ಬೆಂಗಳೂರು: ಇಂದು ನಿಧನ ಹೊಂದಿರುವ ಕೆ.ಎಸ್ ನಿಸಾರ ಅಹ್ಮದ ಅವರ ಅಂತ್ಯ ಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ನಿಸಾರ ಅಹ್ಮದ ಅವರು ಕನ್ನಡ ಮೇರು ಸಾಹಿತಿ. ಸಾಹಿತ್ಯ ಲೋಕದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ರಾಜ್ಯ, ರಾಷ್ಟ್ರ ಪ್ರಶಸ್ತಿಗಳನ್ನ ಪಡೆಯುವ ಮೂಲಕ, ನಾಡಿನ ಸಾಹಿತ್ಯ ಹಿರಿಮೆ ಹೆಚ್ಚಿಸಿದ್ದಾರೆ. ಇಂತಹ ಸಾಹಿತ್ಯ ಅಂತಿಮ ಸಂಸ್ಕಾರವನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದಿದ್ದಾರೆ.

ನಿಸಾರ ಅಹ್ಮದ ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಿ, ಚಿಕ್ಕಬಳ್ಳಾಪುರದಲ್ಲಿ 2.20 ಎಕರೆ ಜಮೀನು ನೀಡಲಾಗಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಅದನ್ನು ಘೋಷಣೆ ಮಾಡಬೇಕಿತ್ತು. ಅಷ್ಟರಲ್ಲಿ ಅವರು ನಮ್ಮನ್ನ ಅಗಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!