ಪ್ರಜಾಸ್ತ್ರ ಸುದ್ದಿ
ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹತ್ತಿರ ಕಾಲುವೆ ಒಡೆದು ಜಮೀನಿಗೆ ನೀರು ನುಗ್ಗಿದೆ. ಇದರ ಪರಿಣಾಮ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
ಮುಳವಾಡ ಏತ ನೀರಾವರಿ ಯೋಜನೆಯ ಹೂವಿನ್ನಹಿಪ್ಪರಗಿ ಶಾಖಾ ಕಾಲುವೆ ಒಡೆದ ಪರಿಣಾಮ ಇದೀಗ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಕೆಬಿಜಿಎನ್ಎಲ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಕಾಲುವೆ ನೀರು ತಡೆಯುವ ಪ್ರಯತ್ನ ನಡೆಸಿದ್ದಾರೆ.