ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕಬಡ್ಡಿ ಪಂದ್ಯಾವಳಿ ವೇಳೆ ವಿದ್ಯಾರ್ಥಿಗಳು ಕಟ್ಟಿಗೆಯಿಂದ ಹೊಡೆದಾಡಿಕೊಂಡ ಘಟನೆ ರಾಮದುರ್ಗ ತಾಲೂಕಿನ ಚಂದರಗಿ ಗ್ರಾಮದಲ್ಲಿ ನಡೆದಿದೆ. ಶಾಲಾ ಆವರಣದಲ್ಲಿ ಆಯೋಜಿಸಿದ್ದ ಫೈನಲ್ ಪಂದ್ಯದಲ್ಲಿ ಮಾರಾಮಾರಿ ನಡೆದಿದೆ.
ಚಂದರಗಿ-ಕಟಗೋಳ ವಿದ್ಯಾರ್ಥಿಗಳ ನಡುವೆ ಫೈನಲ್ ಪಂದ್ಯ ನಡೆದಿತ್ತು. ಪಾಯಿಂಟ್ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಮಾಡಿ ಹುಡುಗರನ್ನು ಓಡಿಸಿದ್ದಾರೆ. ಪಂದ್ಯವನ್ನು ರದ್ದುಗೊಳಿಸಲಾಗಿದೆ.