ಬೆಂಗಳೂರು/ಕಲಬುರಗಿ: ಕಲಬುರಗಿಯಲ್ಲಿ 76 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಶಂಕಿತ ಕರೋನಾದಿಂದ ಸಾವನ್ನಪ್ಪಿದ್ದು ಅಂತ್ಯಕ್ರಿಯೆ ಮುಗಿಯುವ ತನಕ ನಿಗಾ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಮಾತ್ನಾಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಕರೋನಾ ವೈರಸ್ ನಿಂದ ವ್ಯಕ್ತಿ ಸತ್ತಿದ್ದಾನೆ ಅಂತಾ ಹೇಳಲಾಗ್ತಿದೆ. ಆದ್ರೆ, ಅದು ಇನ್ನು ದೃಢಪಟ್ಟಿಲ್ಲವೆಂದು ಹೇಳಿದ್ದಾರೆ.
ಕಲಬುರಗಿಯಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಕರೋನಾ ವರದಿ ಬರಬೇಕಿದೆ. ಸಂಜೆ 4 ಗಂಟೆಗೆ ಲ್ಯಾಬ್ ರಿಪೋರ್ಟ್ ಬರಲಿದೆ. ನಂತರ ಆ ವ್ಯಕ್ತಿಯ ಸಾವಿಗೆ ಕಾರಣ ಏನೆಂದು ತಿಳಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಕಲಬುರಗಿಯ ಮೊಹಮ್ಮದ ಹುಸೇನ ಸಿದ್ದಿಕ್ಕಿ ಎಂಬಾತ ಜ್ವರ, ಶೀತ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ರು. ಹೆಚ್ಚಿನ ಚಿಕಿತ್ಸಗೆ ಹೈದ್ರಾಬಾದ್ ಗೆ ಕಳುಹಿಸಿ ಕೊಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.