ಕಲಬುರಗಿ-ಹುಬ್ಬಳ್ಳಿ ಬಸ್ ನಿಲ್ದಾಣ ಎದುರು ಪ್ರತಿಭಟನೆ

252

ಪ್ರಜಾಸ್ತ್ರ ಸುದ್ದಿ

ಕಲಬುರಗಿ/ಹುಬ್ಬಳ್ಳಿ: ಕೃಷಿ ಮಸೂದೆ ವಿರೋಧಿ ರೈತರು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕಾವು ಪಡೆದುಕೊಳ್ತಿದೆ. ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದ ವಿವಿಧ ರೈತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ವು. ಇದ್ರಿಂದಾಗಿ ಸಧ್ಯಕ್ಕೆ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.

ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟ ಹೋರಾಟಗಾರರು ಜಗತ್ ವೃತ್ತದ ಮೂಲಕ ಮಾರುಕಟ್ಟೆ ತಲುಪಲಿದ್ದಾರೆ. ರೈತ ಕೃಷಿ ಕರ್ಮಿಕ ಸಂಘಟನೆ, ಕರ್ನಾಟಕ ಪ್ರಾಂತ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಸಿಪಿಐ, ಸಿಪಿಎಂ, ಅಖಿಲ ಭಾರತ ಕಿಸಾನ್ ಸಭಾ ಸೇರಿದಂತೆ ಹಲವು ಸಂಘಟನೆಗಳು ಭಾಗವಹಿಸಿವೆ.

ಇನ್ನು ಹುಬ್ಬಳ್ಳಿಯ ಬಸ್ ಡಿಪೋದ ಎದುರು ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗ್ತಿದೆ. ನೂತನವಾಗಿ ನಿರ್ಮಾಣವಾಗಿ ಹೊಸೂರು ಬಸ್ ಡಿಪೋದ ಎದುರು ಪ್ರತಿಭಟನೆ ನಡೆಸ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!