ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಬಹುವರ್ಷಗಳ ಬೇಡಿಕೆಯಾಗಿರುವ ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ನೀರಿನ ಯೋಜನೆಯನ್ನ ಜಾರಿಗೆ ತರಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗ್ತಿದೆ.
ಕರ್ನಾಟಕ ರೈತ ಸೇನಾ ಸಂಘಟನಾ ವತಿಯಿಂದ ಬೆಂಗಳೂರು ಚೆಲೋ ಪ್ರತಿಭಟನೆ ನಡೆಸಲಾಗ್ತಿದೆ. ರೈತ ಹೋರಾಟಗಾರ ವಿರೇಶ ಸಬರದಮಠ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ನಾಯಾಧಿಕರಣ ಹೇಳಿರುವಂತೆ ನೀರನ್ನ ಬಳಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸ್ತಿವೆ. ಇದನ್ನ ಖಂಡಿಸಿ ರೈತರು ಹೋರಾಟ ನಡೆಸಿದ್ದಾರೆ.
ಮಹದಾಯಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ನಮ್ಮ ನೀರನ್ನ ನಮ್ಗೆ ಕೊಡಿಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.