ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಕಾರ್ಯಾಲಯದಲ್ಲಿ ಸರಳವಾಗಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕೋವಿಡ್ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಜಯಂತಿ ಆಚರಿಸಲಾಯಿತು.
ಶಾಸಕ ರಮೇಶ ಭೂಸನೂರ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ತಹಶೀಲ್ದಾರ್ ಸಂಜೀವಕುಮಾರ ದಾಸರ ಸೇರಿದಂತೆ ಹಾಲುಮತ ಸಮಾಜದ ಮುಖಂಡರು ಭಾಗವಹಿಸಿ ಫೋಟೋ ಪೂಜೆ ನೆರವೇರಿಸಿದರು. ಈ ವೇಳೆ ದಾಸ ಶ್ರೇಷ್ಠ, ಸಂತ ಕವಿ ಕನಕದಾಸರ ಬದುಕಿನ ಬಗ್ಗೆ ಗಣ್ಯರು ಸಂಕ್ಷಿಪ್ತವಾಗಿ ಮಾತನಾಡಿದರು.