ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನಟಿ, ಬಿಗ್ ಬಾಸ್ ಶೋನ ಮಾಜಿ ಸ್ಪರ್ಧಿ ಕಾವ್ಯಾ ಶಾಸ್ತ್ರಿ, ಈ ವರ್ಷದ ಬಿಗ್ ಬಾಸ್ ಶೋ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮಕ್ಕಳೆದರು ಬಿಗ್ ಬಾಸ್ ಶೋ ನೋಡಬೇಡಿ. ಇದು ಅವರ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತದೆ ಎಂದು ಸೋಷಿಯಲ್ ಮೀಡಿಯಾ ಇನ್ಸ್ ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಈ ಸಲದ ಕನ್ನಡದ ಬಿಗ್ ಬಾಸ್ ನಿಜಕ್ಕೂ ಬೇಸರ ತಂದಿದೆ. ಶೋನಲ್ಲಿ ಉಳಿಯುವ ಭರದಲ್ಲಿ ಅವಾಚ್ಯ ಶಬ್ಧಗಳಲ್ಲಿ ನಿಂದನೆ, ಚಾರಿತ್ರ್ಯ ವಧೆ, ಹೆಣ್ಣು ಮಕ್ಕಳ ಮೇಲೆ ಏಕವಚನದ ಬಳಕೆ, ಮಾನಸಿಕವಾಗಿ ಇತರರನ್ನು ಕುಗ್ಗಿಸುವ ಪ್ರಯತ್ನ, ಜೋರುಧ್ವನಿಯಲ್ಲಿ ಗೆದರಿಸುವುದು, ಹೆದರಿಸುವುದು ಇವೆಲ್ಲವೂ ಹೆಚ್ಚಾಗಿದೆ. ಚಿಕ್ಕ ಮಕ್ಕಳಿರುವ ತಂದೆ ತಾಯಿಯಂದಿರು ದಯವಿಟ್ಟು ಇಂತಹ ಕಾರ್ಯಕ್ರಮಗಳನ್ನು ಚಿಕ್ಕ ಮಕ್ಕಳ ಎದುರು ನೋಡದಿರಿ. ಇದು ನಿಮ್ಮ ಮಗುವಿನ ಮನಸ್ಸಿನ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತದೆ ಹಾಗೂ ಅವರು ಈ ಸ್ವಭಾವದ ಅನುಕರಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಹಲವು ವಿಚಾರಗಳನ್ನು ಬಿಗ್ ಬಾಸ್ ಸೀಸನ್ 4ರ ಸ್ಪರ್ಧಿ ಕಾವ್ಯಾ ಶಾಸ್ತ್ರಿ ಹೇಳಿದ್ದಾರೆ. ಬಿಗ್ ಬಾಸ್ ಶೋ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ವಿವಾದ ಪಡೆದುಕೊಳ್ಳುತ್ತಿದೆ. ದುರಂತವೆಂದರೆ ಸಮಾಜಕ್ಕೆ ಮೋಸ ಮಾಡಿದ, ಪ್ರಖ್ಯಾತಗಳಿಸುವ ಹುಚ್ಚಿನಲ್ಲಿ ಅಸಹ್ಯವಾಗಿ ನಡೆದುಕೊಂಡಿರುವ, ವಿವಾದಗಳನ್ನು ಮಾಡಿಕೊಂಡಿರುವವರನ್ನೇ ಸ್ಪರ್ಧಿಗಳೆಂದು ಕರೆದುಕೊಂಡು ಬಂದು, ಯುವ ಜನತೆಯನ್ನು ಸಂಪೂರ್ಣವಾಗಿ ಹಾದಿ ತಪ್ಪಿಸುವ ಯತ್ನ ನಡೆದಿದೆ ಎಂದು ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಶೋ ನಿರೂಪಣೆ ಮಾಡುತ್ತಿರುವ ನಟ ಕಿಚ್ಚ ಸುದೀಪ್ ವಿರುದ್ಧ ಸಹ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ.