ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ಕನ್ನಡದಲ್ಲಿ ಯಶ್ ಸಿನಿ ಕರಿಯರ್ ಗೆ ಒಂದೊಳ್ಳೆ ಬ್ರೇಕ್ ನೀಡಿದ ಕಿರಾತಕ ಅನ್ನೋ ಸಿನಿಮಾ ಮಾಡಿದ ನಿರ್ದೇಶಕ ಪ್ರದೀಪ್ ರಾಜ್ ಕೋವಿಡ್ ಸೋಂಕಿನಿಂದಾಗಿ ನಿಧನ ಹೊಂದಿದ್ದಾರೆ. 46 ವರ್ಷದ ಪ್ರದೀಪ್ ರಾಜ್ ಇಂದು ಬೆಳಗ್ಗೆ ನಿಧನಹೊಂದಿದ್ದಾರೆ.
ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದಿದ್ದಾರೆ. ನಿರ್ದೇಶಕ ಪ್ರದೀಪ್ ರಾಜ್ ನಿಧನಕ್ಕೆ ಸಿನಿ ರಂಗದವರು ಸಂತಾಪ ಸೂಚಿಸಿದ್ದಾರೆ. ಅಂಜದಗಂಡು, ಬೆಂಗಳೂರು 23 ಸೇರಿದಂತೆ ಹಲವು ಚಿತ್ರಗಳನ್ನು ಪ್ರದೀಪ್ ರಾಜ್ ನಿರ್ದೇಶನ ಮಾಡಿದ್ದಾರೆ.