ಬೆಳಗಾವಿಯಲ್ಲಿ ಕನ್ನಡ ಧ್ವಜ ಹಾರಿಸಲು ಯಾರಪ್ಪನ ಒಪ್ಪಿಗೆ ಬೇಕು?

280

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕುಂದಾನಗರಿ ಬೆಳಗಾವಿ ಇರೋದು ಕರ್ನಾಟಕದಲ್ಲಿ. ಅದು ಕನ್ನಡಿಗರ ನೆಲ. ಈ ನೆಲದಲ್ಲಿ ಕನ್ನಡದ ಬಾವುಟ ಹಾರಿಸಲು ಯಾರಪ್ಪನ ಒಪ್ಪಿಗೆ ಬೇಕು ಹೇಳಿ? ಯಾಕಂದ್ರೆ ಸೋಮವಾರ ಕನ್ನಡಪರ ಸಂಘಟನೆಗಳು ಬೆಳಗಾವಿ ಮಹಾನಗರ ಪಾಲಿಕೆ ಎದುರು ಧ್ವಜ ಹಾರಿಸಲು ಹೋದಾಗ ಪೊಲೀಸರು ತಡೆಯಲು ಯತ್ನಿಸಿದ್ದಾರೆ.

ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ನೇತೃತ್ವದಲ್ಲಿ ಪಾಲಿಕೆ ಎದುರಿನ ಧ್ವಜ ಸ್ತಂಭದಲ್ಲಿ ಕನ್ನಡದ ಬಾವುಟ ಹಾರಿಸಲು ಹೋದಾಗ, ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಕನ್ನಡಪರ ಹೋರಾಟಗಾರರು ಪಟ್ಟು ಬಿಡದೆ ಧ್ವಜ ಹಾರಿಸಿ, ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.




Leave a Reply

Your email address will not be published. Required fields are marked *

error: Content is protected !!