ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ ಕೆ.ಆರ್ ಮುರಳಿಕೃಷ್ಣ(63) ಅವರು ಮಂಗಳವಾರ ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ.
ಸಣ್ಣ ಸತ್ಯ, ಗರ ಅನ್ನೋ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಗರ ಚಿತ್ರ ಇನ್ನು ಬಿಡುಗಡೆ ಆಗಿಲ್ಲ. ಕರ್ಣನ ಸಂಪತ್ತು, ಮರಳಿ ಗೂಡಿಗೆ, ಬಾಳನೌಕೆ, ಹೃದಯ ಸಾಮ್ರಾಜ್ಯ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದು, ಚಿತ್ರರಂಗದಲ್ಲಿಯೂ ಸೇವೆ ಸಲ್ಲಿಸಿದ್ದಾರೆ.