2020ನೇ ಸಾಲಿನ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಪ್ರಕಟ

250

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದೆ. 2020ನೇ ಸಾಲಿನ ಪ್ರಶಸ್ತಿ ಆಯ್ಕೆ ಪೂರ್ಣಗೊಂಡಿದ್ದು ಶುಕ್ರವಾರ ಪ್ರಕಟಿಸಲಾಗಿದೆ. ಡಾ.ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಯನ್ನ ಚಿಂತಕ ಡಾ.ಟಿ.ವಿ ವೆಂಕಟಾಚಲ ಶಾಸ್ತ್ರಿ ಅವರಿಗೆ ನೀಡಲಾಗಿದೆ.

ವಿಜ್ಞಾನ ಲೇಖಕ ಡಾ.ಸುಧೀಂದ್ರ ಹೊಲ್ದಡ್ಡೇರಿ

ಅತ್ಯುತ್ತಮ ಪ್ರಕಾಶ ಪ್ರಶಸ್ತಿಯನ್ನ ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ.ಜೆ.ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಯನ್ನ ಮೈಸೂರಿನ ಸಯ್ಯದ ಇಸಾಕ್ ರಿಗೆ ನೀಡಲಾಗಿದೆ. ಇಂದು ನಿಧನರಾದ ವಿಜ್ಞಾನ ಲೇಖಕ ಡಾ.ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ನೀಡಲಾಗಿದೆ. ಇವರಿಗೆ ಮರಣೋತ್ತರ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ಕಿಡಿಗೇಡಿಗಳ ಕೃತ್ಯಕ್ಕೆ ಸ್ವಂತ ಗ್ರಂಥಾಲಯ ಕಳೆದುಕೊಂಡ ಸೈಯದ್

ಪ್ರಕಾಶ ಪ್ರಶಸ್ತಿ 1 ಲಕ್ಷ ರೂಪಾಯಿ, ಪ್ರಶಸ್ತಿ ಫಲಕ, ಡಾ.ಎಂ.ಎಂ ಕಲಬುರ್ಗಿ ಪ್ರಶಸ್ತಿ 75 ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಫಲಕ, ರಾಜರತ್ನಂ ಪ್ರಶಸ್ತಿ 50 ಸಾವಿರ ರೂಪಾಯಿ ಹಾಗೂ ಪ್ರಶಸ್ತಿ ಫಲಕ ಹಾಗೂ ಡಾ.ಅನುಪಮ ನಿರಂಜನ ಪ್ರಶಸ್ತಿ 25 ಸಾವಿರ ರೂಪಾಯಿ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಇನ್ನು ಕೆಲ ದಿನಗಳಲ್ಲಿ ಪುಸ್ತಕ ಬಹುಮಾನ ಪ್ರಶಸ್ತಿ ಪ್ರಕಟಿಸಲಾಗುವುದು ಎಂದು ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ ಹಂಚೆ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!