ಸಿಂದಗಿ ತಾಲೂಕು ಆಡಳಿತದಿಂದ ಸಂಭ್ರಮದ ರಾಜ್ಯೋತ್ಸವ

289

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕು ಆಡಳಿತ ವತಿಯಿಂದ ಪಟ್ಟಣದಲ್ಲಿ ಕರ್ನಾಟಕ ರಾಜ್ಯೋತ್ಸವ ಸಮಾರಂಭವನ್ನ ಭರ್ಜರಿಯಾಗಿ ಆಚರಿಸಲಾಯ್ತು. ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಂ.ಸಿ ಮನಗೂಳಿ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ರು.

ಇದೆ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ವಾರ್ಷಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಗೌರವಿಸಲಾಗಿದೆ. ಇದೆ ವೇಳೆ ಎಸ್ಎಸ್ಎಲ್ ಸಿಯಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಅಕ್ಷತಾ ರಾಥೋಡ ಅನ್ನೋ ವಿದ್ಯಾರ್ಥಿಗೆ 1 ಲಕ್ಷ ರೂಪಾಯಿ ನೀಡಿ ಸನ್ಮಾನಿಸಲಾಯ್ತು.

ಇದೆ ಸಂದರ್ಭದಲ್ಲಿ ತಹಶೀಲ್ದಾರ್ ಸಂಜೀವಕುಮಾರ ದಾಸರ, ಸಿಪಿಐ ಎಚ್.ಎಂ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್ ನಗನೂರು, ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಹಾದೇವಿ ಸಾಲಕ್ಕಿ, ಉಪಾಧ್ಯಕ್ಷ ಸಂಜೀವಕುಮಾರ ಎಂಟಮಾನ, ಎಪಿಎಂಸಿ ಅಧ್ಯಕ್ಷ ಗೋಲ್ಲಾಳಪ್ಪ ರೂಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ಸೇರಿದಂತೆ ಅನೇಕರು ಉಪಸ್ಥಿತರಿದ್ರು.




Leave a Reply

Your email address will not be published. Required fields are marked *

error: Content is protected !!