ರಾಜ್ಯದ ಶಾಲೆಗಳಲ್ಲಿ ‘ಕೋಟಿ ಕಂಠ ಗಾಯನ’

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಪ್ರತಿಯೊಂದು ಶಾಲೆಯಲ್ಲಿ ಅಕ್ಟೋಬರ್ 28ರಂದು ಈ ಕಾರ್ಯಕ್ರಮ ನಡೆಯಲಿದೆ.

ನಾಡು, ನುಡಿಯ ಬಗ್ಗೆ ಸಾರುವ 5 ಗೀತೆಗಳನ್ನು ಸಾಮೂಹಿಕವಾಗಿ ಹಾಡಲು ಶಿಕ್ಷಣ ಇಲಾಖೆ ಸೂಚನೆ ಹೊರಡಿಸಿದೆ. ಮೊದಲು ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ ಹಾಡಬೇಕು.

ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಡಿ.ಎಸ್ ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ಕಣವಿ ಅವರ ವಿಶ್ವ ವಿನೂತನ ವಿದ್ಯಾಚೇತನ, ಉಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು. ಈ ವೇಳೆ ಶಿಕ್ಷಕರು, ಮಕ್ಕಳು, ಸಾರ್ವಜಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!