ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ!

403

ಬೆಂಗಳೂರು: ಕಲಬುರಗಿಯಲ್ಲಿ ಡಿಸೆಂಬರ್ ನಲ್ಲಿ ನಡೆಯಬೇಕಿದ್ದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಮುಂದೂಡುವ ಚಿಂತನೆಯಲ್ಲಿ ಸರ್ಕಾರವಿದೆ. ಈ ಬಗ್ಗೆ ಮಾತ್ನಾಡಿರುವ ಡಿಸಿಎಂ ಗೋವಿಂದ ಕಾರಜೋಳ, 2020 ಜನವರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಅಂತಾ ಹೇಳಿದ್ದಾರೆ.

15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುವ ಟೈಂನಲ್ಲಿ ಅಧಿಕಾರಿಗಳು ಬ್ಯುಸಿ ಇರ್ತಾರೆ. ಹೀಗಾಗಿ ಸಮ್ಮೇಳನದಲ್ಲಿ ತೊಡಗಿಸಿಕೊಳ್ಳಲು ಆಗುವುದಿಲ್ಲ. ಆದ್ರಿಂದ, ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳವನ್ನ ಜನವರಿಗೆ ಮುಂದೂಡುವ ಚಿಂತನೆ ನಡೆದಿದೆ ಎಂದಿದ್ದಾರೆ. ಧಾರವಾಡದಲ್ಲಿ ನಡೆದ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ 85ನೇ ಸಮ್ಮೇಳನವನ್ನ ಕಲಬುರಗಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!