ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕನ್ನಡ ಬಾವುಟ ಸುಟ್ಟಿರುವ ಎಂಇಎಸ್ ಪುಂಡರ ದೌರ್ಜನ್ಯ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆಯ 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಅಂಬೇಡ್ಕರ್ ಸರ್ಕಲ್ ನಿಂದ ನೇರವಾಗಿ ಡಿಸಿ ಕಚೇರಿಗೆ ಬಂದು ಎಂಇಎಸ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಇದೇ ವೇಳೆಯಲ್ಲಿ ಡಿಸಿ ಕಚೇರಿಯ ಒಳಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಡಿಆರ್ ವ್ಯಾನ್ನಲ್ಲಿ ಹಾಕಿಕೊಂಡು ವಶಕ್ಕೆ ಪಡೆದುಕೊಂಡರು. ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.