ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಜೆಟ್ ಮಂಡಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳ ಜೊತೆಗೆ ಹೊಸದಾಗಿ ಯೋಜನೆಗಳನ್ನು ಘೋಷಿಸಿದ್ದಾರೆ. ಹೀಗಾಗಿ ಯಾವೆಲ್ಲ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ ಅನ್ನೋದು ಇಲ್ಲಿದೆ..
- ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಗುತ್ತಿಗೆಯಲ್ಲಿ 1 ಕೋಟಿ ರೂ. ಮೀಸಲು
- ಹಿಂದುಳಿದ ವರ್ಗಗಳ ಉದ್ಯಮಿಗಳಿಗೆ 20 ಕೋಟಿ ರೂ. ತನಕ ಶೇ.6ರ ಬಡ್ಡಿದರದಲ್ಲಿ ಸಾಲ
- ಎಸ್ಸಿಪಿ-ಟಿಎಸ್ಪಿ ಅನುದಾನ 34 ಸಾವಿರ ಕೋಟಿ ರೂ.ಗಳಿಗೆ ಏರಿಕೆ
- ಅಹಿಂದ, ಶೋಷಿತ ವರ್ಗಗಳಿಗೆ ವಿಶೇಷ ಕಾರ್ಯಕ್ರಮಗಳ ನಿರೀಕ್ಷೆ
- ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಪತ್ರಕರ್ತರ ಪಿಂಚಣಿ – 12 ಸಾವಿರಕ್ಕೆ, ಕುಟುಂಬ ಪಿಂಚಣಿ. 3 ರಿಂದ 6 ಸಾವಿರಕ್ಕೆ ಏರಿಕೆ
- ಪ್ರಾಥಮಿಕ ಶಾಲಾ ಮಕ್ಕಳ ಆರೋಗ್ಯ ರಕ್ಷಣೆಗೆ ಹೊಸ ಯೋಜನೆ ಘೋಷಣೆ
- ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ
- ಎನ್ಪಿಎಸ್ ರದ್ಧತಿ ಬಗ್ಗೆ ಭರವಸೆ ಸಾಧ್ಯತೆ
- ಕೃಷಿ ಭಾಗ್ಯ ಯೋಜನೆ ಮರು ಜಾರಿ
- ಕೃಷಿ ಭಾಗ್ಯಕ್ಕೆ 200 ಕೋಟಿ ರೂ. ಮೀಸಲು
- ಕೃಷಿ ಬೆಳೆ ವಿಮೆ ಜಾರಿಗೆ ಹಣ
- ನೀರಾವರಿ ಯೋಜನೆಗಳಿಗೆ ಒತ್ತು
- ಸಣ್ಣ ಪ್ರಮಾಣದಲ್ಲಿ ಖಾಲಿ ಹುದ್ದೆಗಳ ಭರ್ತಿ
- ಪಶು ಭಾಗ್ಯ ಯೋಜನೆಯೂ ಮತ್ತೆ ಆರಂಭ
- ಎಪಿಎಂಸಿಗಳ ಸುಧಾರಣೆ