ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 2023ನೇ ಸಾಲಿನ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6ಗಂಟೆಗೆ ತೆರೆ ಬೀಳಲಿದೆ. ಕೇಂದ್ರ ಹಾಗೂ ರಾಜ್ಯ ನಾಯಕರು ನಾಡಿನ ಮೂಲೆ ಮೂಲೆ ಪ್ರಚಾರ ನಡೆಸಿದರು.
ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಎಲ್ಲೆಡೆ ಸುತ್ತಿದ್ದರು. ಇತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಸುರ್ಜೇವಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಹ ಬಿರುಸಿನ ಪ್ರಚಾರ ನಡೆಸಿದರು.
ಇನ್ನು ಪ್ರಾದೇಶಿಕ ಪಕ್ಷ ಜೆಡಿಎಸ್ ನಾಯಕರಾದ ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸೇರಿ ಅನೇಕರು ಪ್ರಚಾರ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿಗೆ ತಾರಾ ಮೆರುಗನ್ನು ಸುದೀಪ್, ದರ್ಶನ್, ಶಿವಣ್ಣ, ರಮ್ಯಾ, ರಾಘವೇಂದ್ರ, ಶಶಿಕುಮಾರ್, ದುನಿಯಾ ವಿಜಿ, ನಶ್ವಿಕಾ ನಾಯ್ಡು ಅನೇಕರು ಸಾಕಷ್ಟು ಕ್ಷೇತ್ರಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ರಾಜ್ಯದಲ್ಲಿ ಮರಳಿ ಆಡಳಿತ ಹಿಡಿಯಬೇಕು ಎನ್ನುತ್ತಿದೆ. ಬಿಜೆಪಿ ಅಧಿಕಾರ ಬಿಟ್ಟು ಕೊಡಬಾರದು ಅಂತಿದೆ. ಜೆಡಿಎಸ್ ಇವರಿಬ್ಬರಿಗೂ ಠಕ್ಕರ್ ಕೊಡಬೇಕು ಅನ್ನೋ ಲೆಕ್ಕಾಚಾರ. ಇವರ ಜೊತೆಗೆ ಆಪ್, ಕೆಆರ್ ಎಸ್, ಯುಪಿಪಿ ಸೇರಿ ಇತರೆ ಪಕ್ಷಗಳು ಒಂದು ಕೈ ನೋಡೋಣ ಎಂದಿವೆ.