ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ/ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತದಾನ ಪ್ರಾರಂಭವಾಗಿದೆ. ಮುಂಜಾನೆ 7ಗಂಟೆಯಿಂದಲೇ ಮತದಾನ ನಡೆಯುತ್ತಿದ್ದು, ಎಲ್ಲೆಡೆ ಬಿರುಸಿನ ಮತದಾನ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ದೇಶ್ಯಾದ್ಯಂತ ಸೌಂಡ್ ಮಾಡುತ್ತಿದೆ. ಕಾರಣ ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವುದು. ಹೀಗಾಗಿ ಮಹೇಶ್ ಟೆಂಗಿನಕಾಯಿ ಇಲ್ಲಿ ಕಮಲ ಪಡೆ ಅಭ್ಯರ್ಥಿಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಬಸವೇಶ್ವರ ನಗರದಲ್ಲಿರುವ ಬೂತ್ ನಲ್ಲಿ ತಮ್ಮ ಹಕ್ಕು ಚಲಾಯಿಸಲು ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು. ಇನ್ನು ಚಿಕ್ಕೋಡಿ ಸದಲಗಾ ಕ್ಷೇತ್ರದ ನಾವದಗಿಯಲ್ಲಿನ ಬೂತ್ ನಂಬರ್ 10ರಲ್ಲಿ ವಿಕಲಚೇತನರಿಗೆ ಪೊಲೀಸ್ ಸಿಬ್ಬಂದಿ ಸಹಾಯ ಮಾಡಿದರು.