ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗಿದ್ದು, ಏಪ್ರಿಲ್ 20ರ ತನಕ ನಾಮಪತ್ರ ಸಲ್ಲಿಕೆ ಮಾಡಬಹುದು.
ಮುಂಜಾನೆ 11ಗಂಟೆಯಿಂದ ಮಧ್ಯಾಹ್ನ 3ಗಂಟೆಯ ತನಕ ನಾಮಪತ್ರ ಸಲ್ಲಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಚುನಾವಣೆ ಆಯೋಗ ಸಲಕ ಸಿದ್ಧತೆಯನ್ನು ಆಯಾ ಮತಕ್ಷೇತ್ರಗಳಲ್ಲಿ ಮಾಡಿಕೊಂಡಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಠೇವಣಿ 10 ಸಾವಿರ ರೂಪಾಯಿ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ಸಾವಿರ ರೂಪಾಯಿ ಇದೆ.
ನಾಮಪತ್ರ ಪರಿಶೀಲನೆ ಏಪ್ರಿಲ್ 21, ವಾಪಸ್ ಪಡೆಯುವ ದಿನಾಂಕ ಏಪ್ರಿಲ್ 24 ಇದೆ. ಮೇ 10ರಂದು ಮತದಾನ ನಡೆಯಲಿದೆ. ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ.