ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಸಿಂದಗಿ: ಹಿರಿಯ ಮಕ್ಕಳ ಸಾಹಿತಿ ಹ.ಮ ಪೂಜಾರ ಅವರಿಗೆ 2023ನೇ ಸಾಲಿನ ಕರದಳ್ಳಿ ಸದ್ಭಾವನಾ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ನಾಗರಾಜ ಕರದಳ್ಳಿ ತಿಳಿಸಿದ್ದಾರೆ.
ಶಹಾಪುರದ ಚಂದ್ರಕಾಂತ ಕರದಳ್ಳಿ ಪ್ರತಿಷ್ಠಾನದಿಂದ ಪ್ರತಿ ವರ್ಷ ಪ್ರಶಸ್ತಿ ನೀಡಿಕೊಂಡು ಬರಲಾಗುತ್ತಿದೆ. ಡಿ.19ರಂದು ಶಹಾಪುರ ಪಟ್ಟಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ, ಸ್ಮರಣಿಕೆ, 5 ಸಾವಿರ ನಗದು ನೀಡಿ ಗೌರವಿಸಲಾಗುವುದು ಎಂದಿದ್ದಾರೆ.